Wednesday, 29 July 2015

ಸಮಾಸ ಎಂದರೇನು..? ಸಮಾಸಗಳ ವಿಧಗಳೆಷ್ಟು..? ಸಮಾಸಗಳು ಹೇಗೆ ಆಗುತ್ತವೆ..?

ಸಮಾಸಗಳು
ಎರಡು ಅಥವಾ ಹಲವು ಪದಗಳು ಒಂದು ಗೂಡಿ ಒಂದು ಶಬ್ಧವಾಗುವುದಕ್ಕೆ ಸಮಾಸ ಎಂದು ಹೆಸರು.
ಉದಾ:
ತಲೆಯಲ್ಲಿ (ಅಲ್ಲಿ) + (ನೋವು) ನೋವು=ತಲೆನೋವು
ಕಣ್ಣಿನಿಂದು(ಇಂದ)+(ಕುರುಡ)ಕುರುಡ=ಕಣ್ಣುಕುರುಡ

ವಿಗ್ರಹ ವಾಕ್ಯ
ಸಮಾಸದ ಅರ್ಥವನ್ನು ಬಿಡಿಸಿ ಹೇಳುವ ಮಾತುಗಳ ಗುಂಪಿಗೆ ವಿಗ್ರಹವಾಕ್ಯವೆಂದು ಹೆಸರು.
ಉದಾ:

ಸಮಸ್ತಪದ = ಪೂರ್ವಪದ + ಉತ್ತರ ಪದ
ದೇವಮಂದಿರ= ದೇವರ + ಮಂದಿರ
ಹೆಜ್ಜೇನು=ಹಿರಿದು + ಜೇನು
ಮುಂಗಾಲು= ಕಾಲಿನ + ಮುಂದು
(ಸಮಾಸದಲ್ಲಿ ಬರುವ ಮೊದಲನೆಯ ಪದವು ಪೂರ್ವ ಪದವೆಂದು, ಎರಡನೆಯ ಪದವನ್ನು ಉತ್ತರ ಪದವೆಂದು ಕರೆಯಲಾಗುತ್ತದೆ.)

ಸಮಾಸ ಪದಗಳಾಗುವ ಸನ್ನಿವೇಶಗಳು
ಸಂಸ್ಕೃತ-ಸಂಸ್ಕೃತ ಶಬ್ಧಗಳು ಸೇರಿ
ಕನ್ನಡ-ಕನ್ನಡ ಶಬ್ಧಗಳು ಸೇರಿ
ತದ್ಬವ-ತದ್ಬವ ಶಬ್ಧಗಳು ಸೇರಿ
ಅಚ್ಚಗನ್ನಡ ಶಬ್ಧ – ತದ್ಬವ ಶಬ್ಧಗಳು ಸೇರಿ ಸಮಾಸಪದಗಳಾಗುತ್ತವೆ.
ಆದರೆ ಕನ್ನಡಕ್ಕೆ – ಸಂಸ್ಕೃತ ಶಬ್ಧಗಳು ಸೇರಿ ಸಮಾಸವಾಗಲಾರದು.
ಸಮಾಸದ ವಿಧಗಳು
ತತ್ಪುರುಷ ಸಮಾಸ
ಕರ್ಮಧಾರೆಯ ಸಮಾಸ
ದ್ವಿಗು ಸಮಾಸ
ಅಂಶಿ ಸಮಾಸ
ದ್ವಂದ್ವ ಸಮಾಸ
ಬಹುವ್ರೀಹಿ ಸಮಾಸ
ಕ್ರಿಯಾ ಸಮಾಸ
ಗಮಕ ಸಮಾಸ
1.ತತ್ಪುರುಷ ಸಮಾಸ
ಎರಡು ನಾಮಪದಗಳು ಸೇರಿ ಸಮಾಸವಾದಾಗ ಉತ್ತರ ಪದದ ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ತತ್ಪುರುಷ ಸಮಾಸ ಎಂದು ಹೆಸರು.
ಉದಾ:

ಮರದ+ಕಾಲು =ಮರಗಾಲು
ಬೆಟ್ಟದ+ತಾವರೆ =ಬೆಟ್ಟದಾವರೆ
ಕೈಯ+ತಪ್ಪು = ಕೈತಪ್ಪು
ಹಗಲಿನಲ್ಲಿ+ಕನಸು =ಹಗಲುಗನಸು
ಅರಮನೆ , ಎದೆಗುಹೆ ,ಜಲರಾಶಿ , ತಲೆನೋವು

2.ಕರ್ಮಧಾರೆಯ ಸಮಾಸ
ಪೂರ್ವೋತ್ತರ ಪದಗಳು ಲಿಂಗ ,ವಚನ, ವಿಭಕ್ತಿಗಳಿಂದ, ಸಮನಾಗಿದ್ದು, ವಿಶೇಷಣ, ವಿಶೇಷ್ಯಗಳಿಂದ ಕೂಡಿ ಆಗುವಸಮಾಸಕ್ಕೆ ಕರ್ಮಧಾರೆಯ ಸಮಾಸ ಎನ್ನಲಾಗಿದೆ.
ಉದಾ:

ಹೊಸದು+ಕನ್ನಡ =ಹೊಸಗನ್ನಡ
ಹಿರಿದು+ಜೇನು =ಹೆಜ್ಜೇನು
ಕಿರಿಯ+ಗೆಜ್ಜೆ =ಕಿರುಗೆಜ್ಜೆ
ಕೆಂದುಟಿ, ಚಿಕ್ಕಮಗು, ಸಿಡಿಮದ್ದು , ಪಂದತಿ

3.ದ್ವಿಗು ಸಮಾಸ
ಪೂರ್ವ ಪದವು ಸಂಖ್ಯಾವಾಚಕವಾಗಿದ್ದು ಉತ್ತರಪದದಲ್ಲಿರುವ ನಾಮಪದದೊಡನೆ ಸೇರಿ ಆಗುವ ಸಮಾಸವೇ ದ್ವಿಗು ಸಮಾಸ.
ಉದಾ:

ಒಂದು + ಕಣ್ಣು = ಒಕ್ಕಣ್ಣು
ಎರಡು+ಬಗೆ=ಇಬ್ಬಗೆ
ಸಪ್ತ+ಸ್ವರ=ಸಪ್ತಸ್ವರ
ನವರಾತ್ರಿ, ನಾಲ್ವಡಿ, ಮುಮ್ಮಡಿ, ದಶಮುಖಗಳು

4.ಅಂಶಿ ಸಮಾಸ
ಪೂರ್ವೋತ್ತರ ಪದಗಳು ಅಂಶಾಂಶಿಭಾವ ಸಂಬಂಧದಿಂದ ಸೇರಿ ಪೂರ್ವಪದದ ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ಅಂಶಿ ಸಮಾಸವೆಂದು ಹೆಸರು. ಅಂಶವೆಂದರೆ ‘ಭಾಗ’ ಅಥವಾ ‘ಅವಯವ’
ಉದಾ:

ತಲೆಯ+ಮುಂದು=ಮುಂದಲೆ
ಬೆರಳಿನ+ತುದಿ = ತುದಿಬೆರಳು
ಕರೆಯ+ಒಳಗು= ಒಳಗೆರೆ
ಹಿಂದಲೆ, ಮುಂಗಾಲು, ಮಧ್ಯರಾತ್ರಿ, ಅಂಗೈ

5.ದ್ವಂದ್ವ ಸಮಾಸ
ಎರಡು ಅಥವಾ ಅನೇಕ ನಾಮಪದಗಳು ಸಹಯೋಗ ತೋರುವಂತೆ ಸೇರಿ ಎಲ್ಲ ಪದಗಳ ಅರ್ಥಗಳೂ ಪ್ರಧಾನವಾಗಿ ಉಳ್ಳ ಸಮಾಸಕ್ಕೆ ದ್ವಂದ್ವ ಸಮಾಸ ಎಂದು ಹೆಸರು.
ಉದಾ:

ಕೆರೆಯು + ಕಟ್ಟಿಯು + ಬಾವಿಯು= ಕೆರೆ ಕಟ್ಟೆ ಬಾವಿಗಳು
ಕಾಫಿಯೂ+ತಿಂಡಿಯೂ=ಕಾಫಿ-ತಿಂಡಿ
ಬೆಟ್ಟವೂ+ಗುಡ್ಡವೂ=ಬೆಟ್ಟಗುಡ್ಡಗಳು
ಅಣ್ಣನು +ತಮ್ಮನು= ಅಣ್ಣತಮ್ಮಂದಿರು
ತನುಮನಗಳು, ಕೈಕಾಲು, ಮಳೆಬೆಳೆ, ನಡೆನುಡಿ

6.ಬಹುವ್ರೀಹಿ ಸಮಾಸ
ಎರಡು ಅಥವಾ ಅನೇಕ ನಾಮಪದಗಳು ಸೇರಿ ಸಮಾಸವಾದಾಗ ಬೇರೊಂದು ಪದದ/ ಅನ್ಯಪದದ ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ಬಹುವ್ರೀಹಿ ಸಮಾಸ ಎಂದು ಹೆಸರು.
ಉದಾ:

ಮೂರು + ಕಣ್ಣು +ಉಳ್ಳವ =ಮುಕ್ಕಣ್ಣ
ಶಾಂತಿಯ + ಖನಿಯಾಗಿರುವನು + ಯಾವನೋ=ಶಾಂತಿಖನಿ
ಸಹಸ್ರ +ಅಕ್ಷಿಗಳು + ಯಾರಿಗೋ =ಸಹಸ್ರಾಕ್ಷ
ಪಂಕದಲ್ಲಿ + ಜನಿಸಿದ್ದು+ಯಾವುದೊ=ಪಂಕಜ
ಚಂದ್ರನಖಿ, ಕುರುಕುಲಾರ್ಕ, ಚಕ್ರಪಾಣಿ, ನಿಶಾಚಾರಿ

7.ಕ್ರಿಯಾ ಸಮಾಸ
ಪೂರ್ವ ಪದವು ದ್ವಿತೀಯ ವಿಭಕ್ತಿಯಿಂದ ಕೂಡಿದ ಪದವಾಗಿದ್ದು, ಉತ್ತರಪದವು ಕ್ರಿಯೆಯೊಡನೆ ಕೂಡಿ ಆಗುವ ಸಮಾಸಕ್ಕೆ ಕ್ರಿಯಾ ಸಮಾಸ ಎನ್ನಲಾಗಿದೆ.
ಉದಾ:

ಸುಳ್ಳನ್ನು +ಆಡು=ಸುಳ್ಳಾಡು
ಕಣ್ಣನ್ನು +ತೆರೆ=ಕಣ್ದೆರೆ
ವಿಷವನ್ನು +ಕಾರು =ವಿಷಕಾರು
ಕೈಯನ್ನು +ಮುಗಿ=ಕೈಮುಗಿ
ಆಸೆಹೊತ್ತು, ಹಣ್ಣುತಿನ್ನು , ಕಂಗೆಡು , ಜೀವಬಿಡು

8.ಗಮಕ ಸಮಾಸ
ಪೂರ್ವ ಪದವು ಸರ್ವನಾಮ, ಕೃದಂತ ಗುಣವಾಚಕ ಸಂಖ್ಯೆಗಳಲ್ಲಿ ಒಂದಾಗಿದ್ದು, ಉತ್ತರದಲ್ಲಿರುವ ನಾಮಪದದೊಡನೆ ಕೂಡಿ ಆಗುವ ಸಮಾಸಕ್ಕೆ ಗಮಕ ಸಮಾಸ ಎಂದು ಹೆಸರು.
ಉದಾ:
ಸರ್ವನಾಮಕ್ಕೆ

ಅವನು +ಹುಡುಗ=ಆ ಹುಡುಗ
ಇವಳು + ಹುಡುಗಿ = ಈ ಹುಡುಗಿ
ಯಾವುದು+ ಮರ=ಯಾವಮರ
ಕೃಂದತಕ್ಕೆ

ಮಾಡಿದುದು+ಅಡುಗೆ =ಮಾಡಿದಡುಗೆ
ತೂಗುವುದು +ತೊಟ್ಟಿಲು =ತೂಗುವ ತೊಟ್ಟಿಲು
ಉಡುವುದು+ದಾರ=ಉಡುದಾರ
ಸುಡುಗಾಡು, ಬೆಂದಡಿಗೆ, ಕಡೆಗೋಲು
ಗುಣವಾಚಕಕ್ಕೆ

ಹಸಿಯದು +ಕಾಯಿ=ಹಸಿಯಕಾಯಿ
ಹಳೆಯದು +ಕನ್ನಡ=ಹಳೆಗನ್ನಡ
ಕಿರಿಮಗಳು, ಬಿಳಿಯಬಟ್ಟೆ , ಅರಳುಮೊಗ್ಗು
ಸಂಖ್ಯೆಗೆ

ನೂರು +ಹತ್ತು =ನೂರಹತ್ತು
ಮೂವತ್ತು+ಆರು=ಮೂವತ್ತಾರು
ಮೂವತ್ತು, ಹೆಪ್ಪತ್ತು, ಇಪ್ಪತೈದು .

ಡಾ.ಎಂ.ಕೆ.ಮಂಜುನಾಥ ಬರವಣಿಗೆಗಳು

  ಮಾ ಕೃ ಮಂಜು ಅರ್ಥಾತ್ ಡಾ.ಎಂ.ಕೆ.ಮಂಜುನಾಥ ಆದ ನಾನು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಮಾಕಳಿ ಗ್ರಾಮದವನು. ತಂದೆ ದೊಡ್ಡಿನಿಂಗೇಗೌಡರ ಮಗ ಕೃಷ್ಣೇಗೌಡ, ತಾಯಿ ಶ...